ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಏಖೇಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮಂಡಲ ಯುವ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ್, ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಮಹಾದೇವ ಹಸುರೆ, ಮಂಡಲ ಅಧ್ಯಕ್ಷ ಗುರುನಾಥ ರಾಜಗೀರಾ, ಪ್ರಧಾನ ಕಾರ್ಯದರ್ಶಿ ಸಂಜುಕುಮಾರ ಕೋಳಿ, ಚಂದ್ರಯ್ಯ ಸ್ವಾಮಿ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಶಿವಕುಮಾರ ಸುಲ್ತಾನಪುರ, ಪ್ರಧಾನ ಕಾರ್ಯದರ್ಶಿ ಗುರು ಪಾಂಪಡೆ, ದಿಲೀಪ ಪಸಾರ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.