Category: ರಾಷ್ಟ್ರ

Modi 3.0 Budget: ಕೇಂದ್ರ ಬಜೆಟ್ ಪ್ರಮುಖಾಂಶಗಳು: ದೇಶದ ಜನರಿಗೆ ನಿರ್ಮಲಾ ಸೀತಾರಾಮನ್ ಗಿಫ್ಟ್

ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಬಳಿಕ ಭಾರತದ ಬಜೆಟ್ ಮಂಡನೆ ಮಾಡುತ್ತಿರುವ ಎರಡನೇ ಮಹಿಳೆ ಅನ್ನೋ ಹೆಗ್ಗಳಿಕೆ ಗಳಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 7ನೇ ಬಾರಿ ಬಜೆಟ್ ಮಂಡನೆ ಮಾಡಿದ್ಧಾರೆ. 6 ಬಾರಿ ಪೂರ್ಣಾವಧಿ ಹಾಗೂ 1 ಬಾರಿ ಮಧ್ಯಂತರ ಬಜೆಟ್ ಮಂಡಿಸಿರುವ ನಿರ್ಮಲಾ ಸೀತಾರಾಮನ್, ಮೋದಿ ಸರ್ಕಾರದ ಮೂರನೇ…
ಬೆಳ್ಳಂಬೆಳ್ಳಿಗೆ ಹಣಕಾಸು ಇಲಾಖೆಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆಯೇ ಹಣಕಾಸು ಇಲಾಖೆ ಕಚೇರಿಗೆ ಭೇಟಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಮೊದಲ ಬಜೆಟ್ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ನರ‍್ಮಲಾ ಸೀತಾರಾಮನ್ ಅವರಿಗೆ ಹಣಕಾಸು…
ಕನೆಗೂ 4 ದಶಕಗಳ ಬಳಿಕ ತೆರೆದ ಜಗನಾಥನ ರತ್ನ ಭಂಡಾರ

ನಾಲ್ಕು ದಶಕಗಳ ಬಳಿಕ ಒಡಿಶಾ ರಾಜ್ಯದ ಪುರಿಯ ಜಗನ್ನಾಥ ದೇವಸ್ಥಾನದ ರತ್ನ ಭಂಡಾರವನ್ನು ತೆರೆಯಲಾಗಿದೆ. ಈ ಭಂಡಾರದಲ್ಲಿ ರಾಜರುಗಳಿಂದ ಕಾಣಿಕೆಯಾಗಿ ಬಂದಿದ್ದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳು ಸಿಕ್ಕಿವೆ. ಒಡಿಶಾದ ಚಾರಿತ್ರಿಕ ಪುರಿ ಜಗನ್ನಾಥ ದೇಗುಲದ ‘ರತ್ನ ಭಂಡಾರ’ದ ಬಾಗಿಲನ್ನು ನಾಲ್ಕು ದಶಕಗಳ ಬಳಿಕ ಮೊದಲ ಬಾರಿಗೆ ಭಾನುವಾರ ಜುಲೈ 14ತೆರೆಯಲಾಯಿತು. ಒಡಿಶಾ ರಾಜ್ಯ ಸರ್ಕಾರ…
ಹಿಂದೂ, ಹಿಂಸಾಚಾರದ ಹೇಳಿಕೆ: ರಾಹುಲ್ ಬೆನ್ನಿಗೆ ನಿಂತ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ!

ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿನ ತಮ್ಮ ಭಾಷಣದಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ದೇಶಾದ್ಯಂತ ಚರ್ಚೆಯಾಗುತ್ತಿದೆ. ಈ ಮಧ್ಯೆ ಉತ್ತರಾಮ್ನಾಯ ಜ್ಯೋತಿಷ್ಪೀಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಕಾಂಗ್ರೆಸ್ ನಾಯಕ ಬೆಂಬಲಕ್ಕೆ ಧಾವಿಸಿದ್ದಾರೆ. ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣದ ಅಂಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪ್ರಧಾನಿ ಮೋದಿ ಇಡೀ ಹಿಂದೂ ಸಮುದಾಯವನ್ನು ಹಿಂಸಾಚಾರಕ್ಕೆ…
ಮೋದಿ ಸರ್ಕಾರದ 3.0 ಬಜೆಟನ ನಿರೀಕ್ಷೆಗಳೆನ್ನು?

ಮೋದಿ ಸರ್ಕಾರದ ಇದು ಮೂರನೇ ಬಜೆಟ್ ಆಗಿದ್ದು, ನಿರ್ಮಾಲ ಸೀತಾರಮಾನ ರವರ ಏಳನೇ ಬಜೆಟ್ ಮಂಡಿಸುತ್ತಿದ್ದಾರೆ, ಈ ಬಜೆಟವು ಜುಲೈ 22 ರಂದು ಮಂಡಿಸುತ್ತಾರೆ ಎಂಬುದಾಗಿದೆ, ಬಹಳಷ್ಟು ಮಂದಿ ಶೇ. 80C ಅಡಿಯಲ್ಲಿ ವಿನಾಯಿತಿಗಳನ್ನು ಹೆಚ್ಚಿಸಲು, ಮತ್ತು ಆರೋಗ್ಯ ವಿಮೆಯ ಮೇಲಿನ ತೆರಿಗೆ ವಿನಾಯಿತಿಗಳನ್ನು ಹೆಚ್ಚಿಸಲು ಕೋರಿದ್ದಾರೆ. ಹಿಂದುಸ್ತಾನಿ ಅಜ್ಞಾತ ಕುಟುಂಬಗಳು ಮತ್ತು ವೈಯಕ್ತಿಕರಿಗೆ ಆರೋಗ್ಯ…
ಆತ್ಮಹತ್ಯೆಗೆ ಶರಣಾದ ಮಡಿವಾಳ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್  ದೇಹ ಪತ್ತೆಗಾಗಿ 250 ಸಿಸಿಟಿವಿ ಕ್ಯಾಮರಾ ಪರಿಶೀಲನೆ!

ಮಡಿವಾಳ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ಆತ್ಮಹತ್ಯೆಗೆ ಶರಣಾಗಿದ್ದರು. ಹೀಗಾಗಿ ಶಿವರಾಜ್‌ಗಾಗಿ ಪೊಲೀಸರು ಹುಟುಕಾಟ ನಡೆಸಿದ್ದರು. ಸುಬ್ರಮಣ್ಯಪುರ ಪೊಲೀಸರು ಹಾಗೂ ಮಡಿವಾಳ ಪೊಲೀಸರಿಂದ ಶಿವರಾಜ್ ಅವರನ್ನು ಹುಡುಕಲಾಗುತ್ತಿತ್ತು. ಅವರ ಪತ್ತೆಗಾಗಿ 250 ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ಮಾಡಲಾಗಿದೆ. ಸತತ ಐದು ದಿನಗಳ ಹುಟುಕಾಟದ ಬಳಿಕವಷ್ಟೇ ಶಿವರಾಜ್ ಅವರ ಮೃತದೇಹ ಪತ್ತೆಯಾಗಿದೆ. ಮೆಟ್ರೋ ಸ್ಟೇಷನ್ ಬಳಿ…
ಕ್ರೇಜಿವಾಲ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್; ದೆಹಲಿ ಸಿಎಂಗೆ ಜೈಲೇ ಗತಿ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲದ ಆದೇಶ ತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಗೆ…
ಲೋಕಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಯಾರ ಆಯ್ಕೆ?

ಹದಿನೆಂಟನೇ ಲೋಕಸಭೆಯ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಈ ಹುದ್ದೆಗೆ ನಡೆದ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಹಿನ್ನಡೆಯನ್ನು ಅನುಭವಿಸಿತ್ತು. ಸಂಪ್ರದಾಯದ ಪ್ರಕಾರ, ಡೆಪ್ಯೂಟಿ ಸ್ಪೀಕರ್ ಹುದ್ದೆ ವಿಪಕ್ಷಗಳಿಗೆ ನೀಡಬೇಕೆನ್ನುವ ಒತ್ತಡಕ್ಕೆ ಬಿಜೆಪಿ ಮಣಿದಿಲ್ಲ. ಹಾಗಾಗಿ, ಈಗ ಡೆಪ್ಯೂಟಿ ಸ್ಪೀಕರ್ ಹುದ್ದೆಗೂ ಚುನಾವಣೆ ನಡೆಯಲಿದೆ. ಮೋದಿಯವರ ಎರಡನೇ ಅವಧಿಯಲ್ಲಿ ಈ ಹುದ್ದೆ ಖಾಲಿಯಾಗಿತ್ತು, ಹದಿನಾರನೇ…
ಲೋಕಸಭೆಯ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ  ರಾಹುಲ ಗಾಂಧಿ.

ಲೋಕಸಭೆ ಸ್ಪೀಕರ್ ಆಯ್ಕೆಯಾಗಿ ಚುನಾವಣೆ ಸಿದ್ದತೆ ನಡೆಯುವ ಸಮಯದಲ್ಲೆ ಲೋಕಸಭೆಯ ಪ್ರತಿಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಇಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ದಿಲ್ಲಿ ನಿವಾಸದಲ್ಲಿ ನಡೆದ ಐಎನ್‌ಡಿಎ ಮೈತ್ರಿಕೂಟದ ನಾಯಕರ ಸಭೆಯ ಬಳಿಕ ಈ ತೀರ್ಮಾನ ಕೈಗೊಳಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ,ಸಿ ವೇಣುಗೋಪಾಲ್ ಹೆಳಿದ್ದಾರೆ. ಅವರು ಈ…
ಸರ್ಕಾರ ಉಳಿಸಿಕೊಳ್ಳುವಲ್ಲಿ ಮೋದಿ ಬ್ಯುಸಿ: 10 ಅವಾಂತರ ಉಲ್ಲೇಖಸಿ ರಾಹುಲ್ ಗಾಂಧಿ ವಾಗ್ದಾಳಿ

ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಹದಿನೈದು ದಿನಗಳಲ್ಲಿ ನಡೆದ ಹತ್ತು ಅವಾಂತರಗಳನ್ನು ಪಟ್ಟಿ ಮಾಡಿದ್ದಾರೆ. ರಾಹುಲ್ ಗಾಂಧಿ ಪಟ್ಟಿ ಮಾಡಿರುವ 10 ಅವಾಂತರಗಳಲ್ಲಿ ನೀಟ್ ಅಕ್ರಮಗಳು, ಯುಜಿಸಿ ನೆಟ್ ಪೇಪರ್ ಸೋರಿಕೆ, ರೈಲು ಅಪಘಾತ, ನೀರಿನ ಬಿಕ್ಕಟ್ಟು ಸೇರಿದೆ.…