ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ಮಾಡುತ್ತಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕ್ಕೆ ನೀಡಿದ್ದಾರೆ.
ಸುನೀಲ್ ಕುಮಾರ್, ಅವರು ಮಾತನಾಡಿ ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಆರ್ಥಿಕ ಸ್ಥಿತಿಗತಿಗಳ ಕುರಿತು ಅಧ್ಯಯನ ಮಾಡದೆ ಅವೈಜ್ಞಾನಿಕವಾಗಿ ಜಾರಿ ಮಾಡಿದ್ದಾರೆ ಎಂದು ಹೇಳಿದರು.
ಈಗ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬೆಲೆ ಏರಿಕೆ ಮಾಡಿದ ಬಳಿಕ, ರೇಷನ್ ಕಾರ್ಡ್ಗಳನ್ನ ರದ್ದು ಪಡಿಸಲು ಸರ್ಕಾರ ಮುಂದಾಗಿರುವುದು ದುರಾದೃಷ್ಟಕರ ಎಂದು ಗರಂ ಆಗಿದ್ದಾರೆ.
ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರ ರದ್ದು ಮಾಡಬಾರದು. ಸರ್ಕಾರದ ಈ ಜನವಿರೋಧಿ ನೀತಿಯ ವಿರುದ್ಧ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರತಿಭಟಿಸಲಿದೆ ಎಂದು ತಿಳಿಸಿದ್ದಾರೆ.