ಕೇಂದ್ರದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಅಳವಡಿಸಿಕೊಳ್ಳಲು ಕರ್ನಾಟಕ ಮುಂದು

ಕೇಂದ್ರದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಅಳವಡಿಸಿಕೊಳ್ಳಲು ಕರ್ನಾಟಕ ಮುಂದು

ರಾಜ್ಯದಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳ ನಿಷೇಧದ ಹೊರತಾಗಿಯೂ, ಅಂತಹ ಬಳಸಿದ ಬ್ಯಾಗ್ ಗಳು
ಹೆಚ್ಚಿನ ಪ್ರಮಾಣದಲ್ಲಿ ಪಟ್ಟಣಗಳು ಮತ್ತು ನಗರಗಳಲ್ಲಿ ಹರಡಿಕೊಂಡಿರುವುದು ಕಂಡುಬರುತ್ತಿದೆ. ಇದಲ್ಲದೆ, ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗಳು ಜೈವಿಕ ವಿಘಟನೀಯ ಎಂಬ ಹೆಸರಿನಲ್ಲಿ ಚಲಾವಣೆಯಲ್ಲಿವೆ.

ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ, ಪರಿಸರ, ಪರಿಸರ ವಿಜ್ಞಾನ ಖಾತೆ ಸಚಿವ ಈಶ್ವರ್ ಖಂಡ್ರೆ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳನ್ನು ತಿದ್ದುಪಡಿ ಮಾಡಲು ಇಲ್ಲವೇ ಕೈಬಿಡಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.

180 ದಿನಗಳಲ್ಲಿ ಕರಗುವ ಜೈವಿಕ ವಿಘಟನೀಯ ಕ್ಯಾರಿ ಬ್ಯಾಗ್ ಗಳು ಬಳಕೆಗೆ ಕೇಂದ್ರ ಸರ್ಕಾರ ಪರಿಚಯಿಸಿದ ನಿಯಮಗಳನ್ನು ಅನುಸರಿಸಲು ಕೆಎಸ್ ಪಿಸಿಬಿ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ.
ಸಚಿವ ಖಂಡ್ರೆ, ಈ ಹಿಂದೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗಳು ಇನ್ನೂ ಏಕೆ ಬಳಕೆಯಲ್ಲಿವೆ ಎಂದು ಕೇಳಿದರು. ಜೈವಿಕ ವಿಘಟನೀಯ ತರಕಾರಿ ಪಾಲಿ ಲಿಕ್ವಿಡ್ ಆಸಿಡ್ ಪಾಲಿಮರ್ ಬ್ಯಾಗ್ ಗಳುನ್ನು ತಯಾರಿಸಿ ಮಾರಾಟ ಮಾಡುವಂತೆ ಕ್ರಮಕೈಗೊಳ್ಳುವಂತೆ ತಿಳಿಸಿದ್ದರು.

ಕೇಂದ್ರ ಪರಿಸರ ಇಲಾಖೆಯ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳು, 2021-22 ಅನ್ನು ಅಳವಡಿಸಿಕೊಳ್ಳುವ ಕುರಿತು ವರದಿಯನ್ನು ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೆಕ್ಕೆಜೋಳದಿಂದ ತಯಾರಿಸಿದ ಚೀಲಗಳು ಆರು ತಿಂಗಳೊಳಗೆ ಕರಗುತ್ತವೆ ಎಂದು ಅಧಿಕಾರಿಗಳು ವಿವರಿಸಿದಾಗ, ಇದನ್ನು ವೈಜ್ಞಾನಿಕವಾಗಿ ಸಾಬೀತುಪಡಿಸಿದರೆ ಸಾರ್ವಜನಿಕ ಬಳಕೆಗೆ ತಯಾರಿಸಲು ಅನುಮತಿ ನೀಡಬಹುದು ಎಂದು ಖಂಡ್ರೆ ಹೇಳಿದರು.

Share this post

Post Comment